ಕರ್ನಾಟಕ ರಾಜ್ಯದಲ್ಲಿ ಕಾನೂನು ಇಲಾಖೆಯ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗದಗ ನಗರದಲ್ಲಿ ಮಾತನಾಡಿದ ಹೆಚ್.ಕೆ. ಪಾಟೀಲ್ ಅವರು ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡುತ್ತೇವೆ ಎಂದು ತಿಳಿಸಿದರು.