ಕರ್ನಾಟಕ ರಾಜ್ಯದಲ್ಲಿ 'ಶಕ್ತಿ ಯೋಜನೆ' ಜಾರಿಯಾಗಿದ್ದು, ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಭಾಗ್ಯ ಲಭಿಸಿದೆ. ಹೀಗಾಗಿ ರಾಜ್ಯದ ಸಾವಿರಾರು ಮಹಿಳೆಯರು ರಾಜ್ಯದ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಪವಿತ್ರ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ಜನಜಂಗುಳಿ ಸೃಷ್ಟಿಯಾಗಿದೆ.