ಬೆಂಗಳೂರಿನ 'ವಾಸವಿ ಅಕಾಡೆಮಿ' ಸಂಸ್ಥೆಯು IAS, IPS ತರಬೇತಿಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಕರ್ನಾಟಕ ಆರ್ಯವೈಶ್ಯ ಮಹಾಸಭಾದಿಂದ ನಡೆಯುತ್ತಿರುವ ವಾಸವಿ ಅಕಾಡೆಮಿಯು IAS, IPS ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮವಾದ ತರಬೇತಿ, ಮಾರ್ಗದರ್ಶನ ನೀಡುತ್ತಿದೆ. 

  ವಾಸವಿ ಅಕಾಡೆಮಿಯ 5 ಬ್ಯಾಚ್ ಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಜುಲೈ 2 ರಂದು ಪ್ರವೇಶ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷರಾದ ಆರ್.ಪಿ. ರವಿಶಂಕರ್ ಅವರು ತಿಳಿಸಿದರು.