ಮಣಿಪುರ ರಾಜ್ಯದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ತಾರಕಕ್ಕೇರಿದೆ. ದುಷ್ಕರ್ಮಿಗಳು ರಾಜಧಾನಿ ಇಂಫಾಲ ನಗರದಲ್ಲಿ ಕೇಂದ್ರ ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳು ಅಮಾಯಕರ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಗಲಭೆಯಲ್ಲಿ ನೂರಾರು ಜನ ಮೃತಪಟ್ಟಿದ್ದಾರೆ. 

  ಮಣಿಪುರ ರಾಜ್ಯ ಸರ್ಕಾರ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಆರ್.ಕೆ. ರಂಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದರು.