ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

Sponsored

कृष्णा हाइट्स - कोटा

कृष्णा हाइट्स की ओर सभी कोटा एवं बूंदी वासियों को नवरात्री, दशहरा तथा दीपावली की हार्दिक शुभकामनायें |

ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ವಿದ್ಯಾರ್ಥಿ ವೇತನ ನೀಡದೆ ವಂಚನೆ ಎಸಗುತ್ತಿವೆ ಎಂದು ರಾಜ್ಯ ಪ್ರಧಾನ ಸಂಚಾಲಕರಾದ ವೇಣುಗೋಪಾಲ್ ಮೌರ್ಯ ಅವರು ಆರೋಪಿಸಿದರು. 

 ಕಳೆದ 5 ವರ್ಷಗಳಿಂದ ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಭ್ರಷ್ಟ ಅಧಿಕಾರಿಗಳಿಂದಾಗಿ ಸಮರ್ಪಕವಾಗಿ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ ಎಂದು ವೇಣುಗೋಪಾಲ್ ಮೌರ್ಯ ಅವರು ಆರೋಪಿಸಿದರು. 

 ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ವೇಣುಗೋಪಾಲ್ ಮೌರ್ಯ ಅವರು ಮನವಿ ಮಾಡಿದರು.