ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗಳು ಹಾಗೂ ಇನ್ನಿತರೆ ಕಾಮಗಾರಿ ಪೂರ್ಣಗೊಳ್ಳುವರೆಗೆ ಟೋಲ್ ಶುಲ್ಕ ಸಂಗ್ರಹಿಸದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರು ಮನವಿ ಸಲ್ಲಿಸಿದರು. ಟೋಲ್ ಶುಲ್ಕ ಸಂಗ್ರಹಿಸದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.