ದೇಶದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಮೃತಪಟ್ಟ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಚಿತ್ರದುರ್ಗದ ಹಿರಿಯೂರು ತಾಲೂಕಿನ ಪ್ರಭಾವಿ ಮುಖಂಡ ಸಿದ್ದೇಶ್ ಯಾದವ್ (49) ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದು ಮೃತಪಟ್ಟದ್ದಾರೆ. ಜಿಲ್ಲಾ ಪ್ರಭಾರಿಗಳ ಸಭೆ ಮುಗಿಸಿ ಹೊರ ಬಂದಾಗ ಹಠಾತ್ತನೆ ಸಿದ್ದೇಶ್ ಅವರಿಗೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸಿದ್ದೇಶ್ ಯಾದವ್ ಅವರು ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದರು.