ಮೈಸೂರು: ವರುಣ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ಸಮಯ ನೀಡದ ಹಿನ್ನೆಲೆ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ.
ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆ ಸಿಎಂ ಆಗಿರುವುದರಿಂದ ಕ್ಷೇತ್ರದ ಜನರಿಗೆ ಸಮಯ ನೀಡಲಾಗುತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಅಗತ್ಯ. ಹೀಗಾಗಿ ಚಿಕ್ಕ ಸ್ಥಾನಮಾನ ನೀಡಿದರೂ ಸಹಕಾರಿ ಆಗಲಿದೆ.
ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ ಆದರೂ ಅಂತಹದ್ದೇ ಸಣ್ಣ ಹುದ್ದೆ ನೀಡಿದರೇ ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದರು
 
  
  
  
  
   
   
   
  