ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮುನಿರತ್ನ ಅವರು ಬಸವೇಶ್ವರ ನಗರದ ನೊಳಂಬ ಲಿಂಗಾಯತ ಸಂಘದ ವತಿಯಿಂದ ಕಂಬಿ ಎಂ.ಸಿದ್ದರಾಮಣ್ಣ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ದಾನಿಗಳ ಸಂಸ್ಮರಣಾ ದಿನಾಚರಣೆ ಮತ್ತು ಡಿಜಿಟಲ್ ಲೈಬ್ರರಿಯನ್ನು ಉದ್ಘಾಟಿಸಿದರು. ನಂತರ ಶಾಸಕರನ್ನು ಅಭಿನಂದಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.