ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ನೀಡಿದ್ದ ಮೊಬೈಲ್‌ ಗಳನ್ನು ಜುಲೈ 10 ರಂದು ಮತ್ತೆ ಸರ್ಕಾರಕ್ಕೆ ವಾಪಸ್ಸು ನೀಡಲಿದ್ದಾರೆ. ಸರ್ಕಾರ 4 ವರ್ಷಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ನೀಡಿತ್ತು. ಆದರೆ ಈಗ ಆ ಮೊಬೈಲ್ ಗಳು ಹಳೆಯದಾಗಿದ್ದು ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮಿ ಅವರು ಹೇಳಿದರು. ಜತೆಗೆ ಅಂಗನವಾಡಿ ಕಾರ್ಯಕರ್ತೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಬಗೆಹರಿಸಬೇಕೆಂದು ಒತ್ತಾಯಿಸಿದರು.