ಬೆಂಗಳೂರು : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮೂಡಲ‌ಪಾಳ್ಯ ವಾರ್ಡ್ 127ರ ಮೂಡಲಪಾಳ್ಯ ವೃತ್ತದ ಬಳಿ ಅಸಂಘಟಿತ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ಸ್ಥಳೀಯ ಶಾಸಕರಾದ ಪ್ರಿಯಕೃಷ್ಣರವರು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಿ ಅಸಂಘಟಿತ ವಲಯದ ಹಲವಾರು ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಇಲಾಖೆಯ ಸಚಿವರೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ‌ಕ್ರಮಗಳನ್ನು ಕೈಗೊಳ್ಳುವುದಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.