ಬೆಂಗಳೂರು : ಉತ್ತಮ ಕೊಠಡಿ, ಶೌಚಾಲಯ, ಹಾಸ್ಟೆಲ್ ಮೊದಲಾದ ಮೂಲಸೌಕರ್ಯಕ್ಕೆ ಆಗ್ರಹಿಸಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಚಿವ ಹಾಗೂ ಶಾಸಕರಾದ ಕೆ ಗೋಪಾಲಯ್ಯರವರು ಸ್ಥಳಕ್ಕೆ ಭೇಟಿ ನೀಡಿ ದೇಶ ಕಟ್ಟುವ ನಾಗರಿಕರಾಗಿ ಬೆಳೆಯುವ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ನೀಡುವುದು ಸರ್ಕಾರದ ಆದ್ಯತೆಯಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ರವರು ಈ ಕುರಿತು ಕೂಡಲೇ ಕ್ರಮ ವಹಿಸುವಂತೆ ಆಗ್ರಹಿಸುತ್ತೇನೆ ಎಂದರು.