ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡನಗರ ವಾರ್ಡ್ ನಲ್ಲಿರುವ ಮಾರುತಿ ವಿದ್ಯಾಲಯದಲ್ಲಿ ಸಂಸದರ ಅನುದಾನದಿಂದ ನೂತನ ಶೌಚಲಯ ಮತ್ತು ಕೊಠಡಿ ನವೀಕರಣ ಕಾಮಗಾರಿಯನ್ನು ಲೋಕಸಭಾ ಸದಸ್ಯರಾದ ತೇಜಸ್ವಿಸೂರ್ಯರವರು, ಶಾಸಕರಾದ ಉದಯ ಗರುಡಾಚಾರ್ ರವರು ಗುದ್ದಲಿಪೂಜೆ ನೇರವೆರಿಸಿದರು.

ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಂಬರೀಶ್(ಅಮರೇಶ್) ಮತ್ತು ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಭಾಗ್ಯವತಿ ಅಮರೇಶ್, ವಾರ್ಡ್ ಅಧ್ಯಕ್ಷರಾದ ಅಜಿತ್ ಮತ್ತು ಮಾರುತಿ ವಿದ್ಯಾಲಯದ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗ ಹಾಗೂ ಸ್ಥಳೀಯ ಮುಖಂಡರುಗಳು ಪಾಲ್ಗೊಂಡಿದ್ದರು.