ಬೆಂಗಳೂರು : ದಕ್ಷಿಣ ವಲಯದಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ಅನಾಹುತ ಆಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ವಿವಿಧ ಇಲಾಖೆಗಳ ಜೊತೆ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದ ವೇಳೆ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಲ್ಲಿಯೂ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗಾಳಿ ಸಹಿತ ಮಳೆಯಾದ ವೇಳೆ ಸಾಕಷ್ಟು ಕಡೆ ಮರಗಳು, ರೆಂಬೆ-ಕೊಂಬೆಗಳು ಧರೆಗುರುಳಲಿವೆ. ಈ ಸಂಬಂಧ ಪಾಲಿಕೆಯ ಅರಣ್ಯ ಶಾಖೆ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸಮನ್ವಯದೊಂದಿಗೆ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು. ದಕ್ಷಿಣ ವಲಯ ವ್ಯಾಪ್ತಿಯ ಮಳೆ ನೀರುಗಾಲುವೆಗಳಲ್ಲಿ ಜಲಮಂಡಳಿಯ ಪೈಪ್ಗಳು ಅಡ್ಡಲಾಗಿರುವುದನ್ನು ಗುರುತಿಸಿ ಅವುಗಳನ್ನು ಬೇರೆಡೆ ಸ್ಥಳಾಂತರಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಈ ಪೈಕಿ ಜಲಮಂಡಳಿ ಇಲಾಖೆ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ 10 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಿದ್ದು, 8 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇನ್ನುಳಿದೆರಡು ಕಡೆ ತಾತ್ಕಾಲಿಕ ಪರಿಹಾರ ತೆಗೆದುಕೊಳ್ಳಲಾಗಿದ್ದು, ಮಳೆಗಾಲ ಪೂರ್ಣಗೊಂಡ ಬಳಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಲಯ ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಉಪ ಆಯುಕ್ತರಾದ ಲಕ್ಷ್ಮೀದೇವಿ, ಮುಖ್ಯ ಅಭಿಯಂತರರಾದ ರಾಜೇಶ್, ಜಲಮಂಡಳಿ, ಬೆಸ್ಕಾಂ, ಸಂಚಾರ ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
16GB रैम और तगड़े प्रोसेसर के साथ लॉन्च हुआ iQOO 12 5G स्मार्टफोन, फीचर जान भूल जाएंगे iPhone
iQOO 12 5G Launched in India iQOO ने स्मार्टफोन को लीजेंड (व्हाइट) और अल्फा (ब्लैक) कलर ऑप्शन में...
राजकुमार रोत का ऐलान, उप-चुनाव में कांग्रेस-BAP का टूट जाएगा गठबधंन
लोकसभा चुनाव में भारत आदिवासी पार्टी और कांग्रेस का गठबंधन हुआ था. राजकुमार रोत इंडिया...
গুৱাহাটী পৌৰ নিগমৰ কৰ আৰোপ কৰাক লৈ কটু সমালোচনা AIUDFৰ বিধায়ক ৰফিকুল ইছলামৰ
গুৱাহাটী পৌৰ নিগমৰ কৰ আৰোপ কৰাক লৈ কটু সমালোচনা AIUDFৰ বিধায়ক ৰফিকুল ইছলামৰ
Hyundai મોટર ઇન્ડિયા ફાઉન્ડેશન અને Neo hyundai ના સહયોગથી કોરોના વેક્સિનની કીટનું વિતરણ કરાયું
Hyundai મોટર ઇન્ડિયા ફાઉન્ડેશન અને Neo hyundai ના સહયોગથી કોરોના વેક્સિનની કીટનું વિતરણ કરાયું