ಬೆಂಗಳೂರು : ದಕ್ಷಿಣ ವಲಯದಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ಅನಾಹುತ ಆಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ವಿವಿಧ ಇಲಾಖೆಗಳ ಜೊತೆ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದ ವೇಳೆ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಸಂಚಾರಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಲ್ಲಿಯೂ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗಾಳಿ ಸಹಿತ ಮಳೆಯಾದ ವೇಳೆ ಸಾಕಷ್ಟು ಕಡೆ ಮರಗಳು, ರೆಂಬೆ-ಕೊಂಬೆಗಳು ಧರೆಗುರುಳಲಿವೆ. ಈ ಸಂಬಂಧ ಪಾಲಿಕೆಯ ಅರಣ್ಯ ಶಾಖೆ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸಮನ್ವಯದೊಂದಿಗೆ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಿದರು. ದಕ್ಷಿಣ ವಲಯ ವ್ಯಾಪ್ತಿಯ ಮಳೆ ನೀರುಗಾಲುವೆಗಳಲ್ಲಿ ಜಲಮಂಡಳಿಯ ಪೈಪ್ಗಳು ಅಡ್ಡಲಾಗಿರುವುದನ್ನು ಗುರುತಿಸಿ ಅವುಗಳನ್ನು ಬೇರೆಡೆ ಸ್ಥಳಾಂತರಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಈ ಪೈಕಿ ಜಲಮಂಡಳಿ ಇಲಾಖೆ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು. ದಕ್ಷಿಣ ವಲಯ ವ್ಯಾಪ್ತಿಯಲ್ಲಿ 10 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಿದ್ದು, 8 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇನ್ನುಳಿದೆರಡು ಕಡೆ ತಾತ್ಕಾಲಿಕ ಪರಿಹಾರ ತೆಗೆದುಕೊಳ್ಳಲಾಗಿದ್ದು, ಮಳೆಗಾಲ ಪೂರ್ಣಗೊಂಡ ಬಳಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಲಯ ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಉಪ ಆಯುಕ್ತರಾದ ಲಕ್ಷ್ಮೀದೇವಿ, ಮುಖ್ಯ ಅಭಿಯಂತರರಾದ ರಾಜೇಶ್, ಜಲಮಂಡಳಿ, ಬೆಸ್ಕಾಂ, ಸಂಚಾರ ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
गोपाल लाल मंदिर पर श्री जगन्नाथ स्वामी का प्रचार रथ शंखनाद, झालरों की झंकार के साथ पहुंचा
गोपाल लाल मंदिर पर श्री जगन्नाथ स्वामी का प्रचार रथ शंखनाद, झालरों की झंकार के साथ पहुंचा इस्कॉन...
The start up ecosystem in Pakistan has truly come of age. This #AutomaticLaanatMachine is the latest invention from #pakistan. pic.twitter.com/BO7L1so53Z
— Janta First (@janta_first) August 19, 2022
પાકિસ્તાનમાં ભેજાબાજે બનાવ્યું ચંપલ મારવાનુ ઓટોમેટિક મશિન, વિડિયો વાયરલ
પાકિસ્તાનમાં ભેજાબાજે બનાવ્યું ચંપલ મારવાનુ ઓટોમેટિક મશિન, વિડિયો વાયરલ
Squint is a common eye problem which can easily be traeated - Vasan Eye Care
November 15, 2024
Squint /strabismus or commonly known as ‘cross eyed’ is a condition...
শিৱসাগৰ অসামৰিক চিকিৎসালয়ত ১.৪৪ কোটি টকাৰে নিৰ্মাণ হ’ব ৰক্ত কণিকাৰ পৃথকীকৰণ গোট
জয়সাগৰস্থিত শিৱসাগৰ অসামৰিক চিকিৎসালয়ৰ ৰক্ত ভঁৰালত এক নতুন ৰক্ত কণিকাৰ পৃথকীকৰণ গোট পাৱাৰ গ্ৰীড...
তিতাবৰৰ যুৱ ব্যৱসায়ী দীনেশ শইকীয়াৰ মৃত্যুত শোকৰ ছাঁ ।।
তিতাবৰৰ যুৱ ব্যৱসায়ী দীনেশ শইকীয়াৰ মৃত্যুত শোকৰ ছাঁ ।।