ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನಲ್ಲಿರುವ ಪರಿಮಳ ನಗರದಲ್ಲಿ ಜರುಗಿದ ಅಣ್ಣಮ್ಮ ದೇವಿ ಊರ ಹಬ್ಬ ಹಾಗೂ 25 ನೇ ವರ್ಷದ ವಾರ್ಷಿಕೋತ್ಸವ ಆಚರಣೆ ಮಹೋತ್ಸವಕ್ಕೆ ಚಾಲನೆ ನೀಡಿ ಶುಭಾಶಯ ಕೋರಿದ್ದ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ಅವರಿಗೆ ಅಣ್ಣಮ್ಮ ಉತ್ಸವ ಸಮಿತಿ ವತಿಯಿಂದ ಶಾಲು ಹೊದಿಸಿ ಹಾರ ಹಾಕಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಈ ಉತ್ಸವ ಸಮಿತಿ ಪದಾಧಿಕಾರಿಗಳಾದ ನಾಗರಾಜ್ ಸುರಭಿ ,ಪ್ರಸನ್ನ ಮುನಿರಾಜು, ಕರಿಯಪ್ಪ, ಹನುಮಂತಣ್ಣ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.