ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಅತ್ಯಾಚಾರ ಪ್ರಕರಣವನ್ನು ಇಡೀ ದೇಶವೇ ಕಟುವಾಗಿ ಖಂಡಿಸುತ್ತಿದೆ. ಈ ಹೀನ ಪ್ರಕರಣ ಇಂದು ಲೋಕಸಭಾ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರದ ವಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿವೆ.