ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಅತ್ಯಾಚಾರ ಪ್ರಕರಣ ಇಂದು ಲೋಕಸಭಾ ಕಲಾಪದಲ್ಲಿ ಪ್ರತಿಧ್ವನಿಸಿದೆ. ಈ ಹೀನ ಪ್ರಕರಣದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ಮಾತನಾಡಿದರು. "ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಂತ ಗಂಭೀರವಾಗಿದೆ, ಮಣಿಪುರದ ಸದ್ಯದ ಪರಿಸ್ಥಿತಿಯ ಬಗ್ಗೆ ನಮಗೆ ಅರಿವಿದೆ." ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. "ಮಹಿಳೆಯರ ಮೇಲೆ ನಡೆದಿರುವ ಈ ಗಂಭೀರ ಪ್ರಕರಣದಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ." ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ ಎಂದು ರಾಜ್ ನಾಥ್ ಸಿಂಗ್ ಅವರು ತಿಳಿಸಿದರು.