December 4, 2023 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ'ಯ ಪೌರಕಾರ್ಮಿಕರ ಕ್ರಿಯಾ ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ರಾಜ್ಯ ಸರ್ಕಾರವು ಬಿಬಿಎಂಪಿಯಲ್ಲಿನ ನೇರ ವೇತನ ಪೌರಕಾರ್ಮಿಕರು, ಲಾರಿ ಚಾಲಕರು ಆಟೋ ಚಾಲಕರು ಸಹಾಯಕರು ಹಾಗೂ ಲೀಡರ್ಸ್ ಗಳಿಗೆ ಖಾಯಂ ಉದ್ಯೋಗ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 5ರಂದು ಬೆಂಗಳೂರಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ಡಾ|| ರಾಜಕುಮಾರ್ ಗಾಜಿನ ಮನೆಯಲ್ಲಿ ಪೌರಕಾರ್ಮಿಕರನ್ನು ಕಾಯ ಮಾಡಲು ಒತ್ತಾಯಿಸಿ ಸಭೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.