December 20, 2023

Sponsored

कृष्णा हाइट्स - कोटा

कृष्णा हाइट्स की ओर सभी कोटा एवं बूंदी वासियों को नवरात्री, दशहरा तथा दीपावली की हार्दिक शुभकामनायें |

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಾಜ್ಯ ಆದಿಜಾಂಬವ ಸಂಘ, 'ಕರ್ನಾಟಕ ರಾಜ್ಯ ಚರ್ಮ ಕುಶಲಕರ್ಮಿಗಳ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಎಡತೊರೆ ಎಂ. ನಿಂಗರಾಜ್ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಚರ್ಮ ಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಲಿಡ್ಕರ್ ಸಂಸ್ಥೆಗೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು. ಜೊತೆಗೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಎಂ ಎಸ್ ವಸುಂಧರಾ ಅವರನ್ನು ಖಾಯಂ ಆಗಿ ನಿಯೋಜನೆ ಮಾಡಬೇಕೆಂದು ಒತ್ತಾಯಿಸಿದರು.

  ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎಸ್. ಡಿ ಬಾಲರಾಜು, ಪ್ರಧಾನ ಕಾರ್ಯದರ್ಶಿಯಾದ ಹನುಮಂತರಾಯಪ್ಪ ಹಾಗೂ ಜಂಟಿ ಕಾರ್ಯದರ್ಶಿ ಮಂಜುನಾಥ್ ಅವರು ಉಪಸ್ಥಿತರಿದ್ದರು.