ಜನವರಿ 16 , 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ'ಡಾ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ಅವರು ಮಾತನಾಡಿದರು. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ.

    ಈ ಹಿನ್ನಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕ ದೇವಿ ಮೈದಾನದಲ್ಲಿ ಜನವರಿ 21, 22 ರಂದು "ತ್ರಯೋದಶ ಲಕ್ಷ ಶ್ರೀ ರಾಮತಾರಕ ಮಹಾಯಾಗ ಶ್ರೀ ಸೀತಾ ಕಲ್ಯಾಣೋತ್ಸವ ಹಾಗೂ ಕಲಶಾಭಿಷೇಕ" ನಡೆಯಲಿದೆ ಎಂದು ಅಶೋಕ್ ಹಾರನಹಳ್ಳಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.