ಜನವರಿ 24, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಟೈಲರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಬಿ.ಎ ನಾರಾಯಣ ಅವರು ಮಾತನಾಡಿದರು.

 ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ಜನವರಿ 30ರಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ನ " ರಜತಾ ಮಹೋತ್ಸವ ಸಂಭ್ರಮ" ಮತ್ತು " ರಾಜ್ಯಮಟ್ಟದ ಟೈಲರ್ ವೃತ್ತಿ ಬಾಂಧವರ ಬೃಹತ್ ಸಮಾವೇಶ" ನಡೆಯಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

  ಈ ಸಮಾರಂಭವನ್ನು ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಜತೆಗೆ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬಿ.ಎ ನಾರಾಯಣ ಅವರು ತಿಳಿಸಿದರು.