ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕನ್ನಡ ಜಾಗೃತಿ ವೇದಿಕೆ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಕೆ. ಮಂಜುನಾಥ ದೇವ ಅವರು ಮಾತನಾಡಿದರು. ಕನ್ನಡ ಜಾಗೃತಿ ವೇದಿಕೆಯು ಆರಂಭವಾಗಿ 30 ವರ್ಷ ಪೂರೈಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಫೆಬ್ರವರಿ 4ರಂದು "ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ನಡೆಯಲಿದೆ" ಎಂದು ಕೆ. ಮಂಜುನಾಥ ದೇವ ಅವರು ಮಾಧ್ಯಮಗಳಿಗೆ ತಿಳಿಸಿದರು.

  ಈ ಸಮಾವೇಶವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಕೆ ಮಂಜುನಾಥ ದೇವ ಅವರು ತಿಳಿಸಿದರು.

    ಕನ್ನಡಿಗರ ಈ ಬೃಹತ್ ಸಮಾವೇಶದಲ್ಲಿ ಕನ್ನಡ ಜಾಗೃತಿ ವೇದಿಕೆಯ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಂಜುನಾಥ ದೇವ ಅವರು ತಿಳಿಸಿದರು.