ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಸೀತಾರಾಮ್ ಅವರು ಮಾತನಾಡಿದರು.

 ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ)ದಿಂದ ಪ್ರಮೋದ್ ಮದ್ವರಾಜ್ ಅವರಿಗೆ ಅವಕಾಶ ನೀಡಬೇಕೆಂದು ಸೀತಾರಾಮ್ ಅವರು ಒತ್ತಾಯಿಸಿದರು.

 ಪ್ರಮೋದ್ ಮಧ್ವರಾಜ್ ಅವರು ಕೋಲಿ ಮತ್ತು ಮೊಗವೀರ ಸಮುದಾಯಕ್ಕೆ ಸೇರಿದ್ದು, ಬಿಜೆಪಿ ಪಕ್ಷದ ಘಟನೆಗಾಗಿ ಸಾಕಷ್ಟು ದುಡಿದಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷದ ವರಿಷ್ಠರು ಪ್ರಮೋದ್ ಯುವರಾಜ್ ಅವರಿಗೆ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಸೀತಾರಾಮ್ ಅವರು ಒತ್ತಾಯಿಸಿದರು.