ಫೆಬ್ರವರಿ 2, 2024

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕೋಲಿ ಸಮಾಜದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಈ ಪತ್ರಿಕಾಗೋಷ್ಠಿಯಲ್ಲಿ ಕೋಲಿ ಸಮಾಜದ ರಾಜ್ಯ ಗೌರವಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಾಮಕನೂರ ಅವರು ಮಾತನಾಡಿದರು.

   ಕಲಬುರಗಿ ನಗರದ ನೂತನ ವಿದ್ಯಾಲಯ (ಎನ್.ವಿ) ಮೈದಾನದಲ್ಲಿ ಫೆಬ್ರವರಿ 25ರಂದು "ಕೋಲಿ ಸಮಾಜದ ರಾಜ್ಯಮಟ್ಟದ ಬೃಹತ್ ಸಮಾವೇಶ" ನಡೆಯಲಿದೆ ಎಂದು ತಿಪ್ಪಣ್ಣಪ್ಪ ಕಾಮಕನೂರ ಅವರು ಮಾಧ್ಯಮಗಳಿಗೆ ತಿಳಿಸಿದರು.

   ಈ ಬೃಹತ್ ಸಮಾವೇಶವನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಉದ್ಘಾಟಿಸಲಿದ್ದಾರೆ. ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

  ಕೋಲಿ ಸಮಾಜವನ್ನು 'ಪರಿಶಿಷ್ಟ ಪಂಗಡ' ಪಟ್ಟಿಗೆ ಸೇರಿಸಿ ಮೀಸಲಾತಿ ನೀಡಬೇಕೆಂದು ಈ ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದು ತಿಪ್ಪಣ್ಣಪ್ಪ ಕಾಮಕನೂರ ಅವರು ತಿಳಿಸಿದರು.

    ಈ ಬೃಹತ್ ಸಮಾವೇಶದಲ್ಲಿ ಕೋಲಿ ಸಮಾಜದ 7 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ತಿಪ್ಪಣ್ಣಪ್ಪ ಕಾಮಕನೂರ ಅವರು ತಿಳಿಸಿದರು.