ಫೆಬ್ರವರಿ 14, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಿಯೂಯಿ ರಿಯು ಕರಾಟೆ ಡೊ ಕೊಬುಡೊ ಆರ್ಗನೈಸೇಷನ್ ಆಫ್ ಇಂಡಿಯಾ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎಸ್ ಚಂದ್ರಶೇಖರ್ ಅವರು ಮಾತನಾಡಿದರು.

 ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆಬ್ರವರಿ 16 ರಿಂದ 18ರವರೆಗೆ ಅಂತರಾಷ್ಟ್ರೀಯ ಕರಾಟೆ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಎಸ್. ಚಂದ್ರಶೇಖರ್ ಅವರು ಮಾಧ್ಯಮಗಳಿಗೆ ತಿಳಿಸಿದರು.