ಫೆಬ್ರವರಿ 17, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

  ಈ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಮಲ್ಲಿಕಾರ್ಜುನ ಬಟಗಿ ಅವರು ಮಾತನಾಡಿದರು. 

 ರಾಜ್ಯ ಸರ್ಕಾರವು ವಾಲ್ಮೀಕಿ ಸಮುದಾಯ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

   ವಾಲ್ಮೀಕಿ ಸಮಾಜದ ನಾಯಕರ ಪ್ರಮುಖ ಬೇಡಿಕೆಗಳೆಂದರೆ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸರ್ಕಾರಗಳು ನೀಡಿರುವ ನಕಲಿ ಎಸ್ ಟಿ "ತಳವಾರ ಪರಿವಾರ" ಜಾತಿ ಪ್ರಮಾಣ ಪತ್ರಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ನಕಲಿ ಎಸ್‌ಟಿ ಪ್ರಮಾಣ ಪತ್ರಗಳ ತನಿಖೆಗೆ ಒಂದು ಕ್ರಿಯಾ ಸಮಿತಿ ರಚಿಸಬೇಕು.