ಫೆಬ್ರವರಿ 21, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಇಂಚರ ಸುಗಮ ಸಂಗೀತ ಸಂಸ್ಥೆ' ಹಾಗೂ 'ಕನ್ನಡ ಅಭಿವೃದ್ಧಿ ಪ್ರತಿಷ್ಠಾನ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಸಭಾಂಗಣದಲ್ಲಿ ಫೆಬ್ರವರಿ 23ರಂದು ಸಾಹಿತಿ ಡಾ. ಶಂಕರ ಹಲ್ಲೇಗೆರೆ ಅವರ ಮನಮಲ್ಲಿಗೆ ಧ್ವನಿಸಾಂದ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

  ಜೊತೆಗೆ ಇದೇ ಕಾರ್ಯಕ್ರಮದಲ್ಲಿ ಸಂತ ಶಿಶುನಾಳ ಶರೀಫ ಪ್ರಶಸ್ತಿ ಪುರಸ್ಕೃತ ಪ್ರಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕರಿಗೆ ಭಾವಾಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಶಂಕರ ಹಲ್ಲೇಗೆರೆ ಮಾಧ್ಯಮಗಳಿಗೆ ತಿಳಿಸಿದರು.