ಮಾರ್ಚ್ 11, 2024

Sponsored

कृष्णा हाइट्स - कोटा

कृष्णा हाइट्स की ओर सभी कोटा एवं बूंदी वासियों को नवरात्री, दशहरा तथा दीपावली की हार्दिक शुभकामनायें |

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ' ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರು ಹಾಗೂ ಸಂಘದ ಅಧ್ಯಕ್ಷರಾದ ಬಿ.ಟಿ. ಲಲಿತಾ ನಾಯಕ್ ಅವರು ಮಾತನಾಡಿದರು.

 ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದವರು ವಿಜಯಪುರ ಮೀಸಲು ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಂಜಾರ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುತ್ತಿದ್ದರು. ಆದರೆ ಈ ಬಾರಿ ವಿಜಯಪುರ ಕ್ಷೇತ್ರದಲ್ಲಿ ಬೇರೆ ಸಮುದಾಯದ ಅಭ್ಯರ್ಥಿ ಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ.

 ಹಾಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು ಈ ಬಗ್ಗೆ ಮರು ಪರಿಶೀಲನೆ ಮಾಡಿ ವಿಜಯಪುರ ಕ್ಷೇತ್ರದಲ್ಲಿ ಮಾಜಿ ಶಾಸಕರಾದ ಶ್ರೀ ಮನೋಹರ ಐನಾಪೂರ ಅವರಿಗೆ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಬಿ. ಟಿ. ಲಲಿತಾ ನಾಯಕ್ ಅವರು ಒತ್ತಾಯಿಸಿದರು.