ಮಾರ್ಚ್ 18, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ "ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ರಫಾಯಲ್ ರಾಜ್ ಅವರು ಮಾತನಾಡಿದರು.

 ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬರ್ತಲೋಮಿಯೊ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

 ಈ ಬಗ್ಗೆ ಈಗಾಗಲೇ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮನವಿ ನೀಡಲಾಗಿದೆ ಎಂದು ರಫಾಯಲ್ ರಾಜ್ ಅವರು ಹೇಳಿದರು.