ಮಾರ್ಚ್ 29, 2024

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಪದವಿ ವಿದ್ಯಾರ್ಥಿ ಕಾಂತ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಸಲಿದ್ದಾರೆ.

ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಮತದಾನ ನಡೆಯಬೇಕು. ಮತದಾರರು ಹಣಕ್ಕೆ ತಮ್ಮ ಅಮೂಲ್ಯವಾದ ಮತವನ್ನು ಮಾರಾಟ ಮಾಡಬಾರದು ಎಂದು ಕಾಂತ ಕುಮಾರ್ ಅವರು ಹೇಳಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಮಾಡುತ್ತೇನೆ ಎಂದು ಕಾಂತ ಕುಮಾರ್ ಅವರು ಹೇಳಿದರು. ಜತೆಗೆ ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತೇನೆ ಎಂದು ಕಾಂತ ಕುಮಾರ್ ಅವರು ಹೇಳಿದರು.