ಏಪ್ರಿಲ್ 24, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಪಿ.ಟಿ.ಸಿ.ಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ'ಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಈ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ PTCL ಮಂಜುನಾಥ್ ಅವರು ಮಾತನಾಡಿದರು. 

ರಾಜ್ಯ ಕಾಂಗ್ರೆಸ್ ಸರ್ಕಾರ PTCL ಕಾಯ್ದೆಗೆ ಕಾಲಮಿತಿ ಅನ್ವಯಿಸುವುದಿಲ್ಲ ಎಂದು ತಿದ್ದುಪಡಿ ಮಾಡಿದೆ. ಇದರಿಂದಾಗಿ ಸಾವಿರಾರು ಭೂಮಿ ವಂಚಿತರಿಗೆ ಅನುಕೂಲವಾಗಿದೆ. ಹಾಗಾಗಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು PTCL ಮಂಜುನಾಥ್ ಅವರು ಮನವಿ ಮಾಡಿದರು. 

ಜತೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅನುಷ್ಠಾನಕ್ಕೆ ತಂದಿದೆ ಎಂದು PTCL ಮಂಜುನಾಥ್ ಹರ್ಷ ವ್ಯಕ್ತಪಡಿಸಿದರು.