ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ದಲಿತ ಸಂಘರ್ಷ ಸಮಿತಿ' - ಅಂಬೇಡ್ಕರ್ ವಾದ, ರಾಜ್ಯ ಸಮಿತಿಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾತನಾಡಿದರು. 

 ಬೆಂಗಳೂರಿನ ಟೌನ್ ಹಾಲ್ ನಲ್ಲಿ ಜೂನ್ 9 ರಂದು ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಜನ್ಮದಿನಾಚರಣೆಯನ್ನು "ಪ್ರೊ. ಬಿಕೆ - 88 ಸಂಘರ್ಷ ದಿನ" ಎಂಬ ಹೆಸರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾವಳ್ಳಿ ಶಂಕರ್ ಅವರು ಮಾಧ್ಯಮಗಳಿಗೆ ತಿಳಿಸಿದರು. 

 ಈ ಸಮಾರಂಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ. ಮಹದೇವಪ್ಪ ಅವರು ಭಾಗವಹಿಸಲಿದ್ದಾರೆ ಎಂದು ಮಾವಳ್ಳಿ ಶಂಕರ್ ಅವರು ತಿಳಿಸಿದರು.