ಜೂನ್ 15, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಪೌರಕಾರ್ಮಿಕ ಮತ್ತು ಸಫಾಯಿ ಕರ್ಮಚಾರಿ ವರ್ಕರ್ಸ್ ಯೂನಿಯನ್' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಗಂಗಾಧರ್ ಅವರು ಮಾತನಾಡಿದರು. 

 ರಾಜ್ಯ ಸರ್ಕಾರವು ಐ.ಪಿ.ಡಿ ಸಾಲಪ್ಪ ಅವರ ವರದಿಯಂತೆ ರಾಜ್ಯದಲ್ಲಿರುವ ಎಲ್ಲಾ ಸ್ವಚ್ಛತಾ ಅವರ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡಬೇಕೆಂದು ಗಂಗಾಧರ್ ಅವರು ಒತ್ತಾಯಿಸಿದರು. 

 ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಜೂನ್ 19ರಂದು ಸ್ವಚ್ಛತಾ ಪೌರಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡಬೇಕೆಂದು ಒತ್ತಾಯಿಸಿ "ಅನಿರ್ದಿಷ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ" ಮಾಡಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಗಂಗಾಧರ್, ಗೌರವಾಧ್ಯಕ್ಷರಾದ ಎನ್. ಶ್ರೀನಿವಾಸ ಮೂರ್ತಿ, ಪ್ರಧಾನ ಕಾರ್ಯದರ್ಶಿಯಾದ ಭಗವಾನಾಥ್ ಚಂದ್ರಣ್ಣ ಅವರು ಉಪಸ್ಥಿತರಿದ್ದರು.