ಜೂನ್ 24, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಐಸಿಡಿಎಸ್ ಉಳಿಸಿ - ಮಕ್ಕಳನ್ನು ರಕ್ಷಿಸಿ ಆಂದೋಲನ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ಶಿಕ್ಷಣ ಇಲಾಖೆಯು ಹೊಸ ಪರಿಕಲ್ಪನೆಯೊಂದಿಗೆ 4ರಿಂದ 6ವರ್ಷದ ಮಕ್ಕಳಿಗೆ ಎಲ್.ಕೆ.ಜಿ - ಯು.ಕೆ.ಜಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಸುತ್ತೋಲೆ ಹೊರಡಿಸಿದೆ. ಇದುವರೆಗೂ ರಾಜ್ಯದಲ್ಲಿ 2524 ಶಾಲೆಗಳಲ್ಲಿ ಪ್ರಾರಂಭಿಸಿದೆ. 

ಇದರಿಂದ ಸರ್ಕಾರದ ಐಸಿಡಿಎಸ್ ಯೋಜನೆಯಿಂದ ನಡೆಯುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಶಾಲಾಪೂರ್ವ ಶಿಕ್ಷಣ ಕುರಿತ ಇಸಿಸಿಇ ಅಂಶಗಳ ಜಾರಿಗೆ ತೀವ್ರ ಧಕ್ಕೆಯಾಗಿದೆ. 

ಹಾಗಾಗಿ ರಾಜ್ಯದ ಸರ್ಕಾರವು ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳನ್ನು ಉಳಿಸಿ - ಮಕ್ಕಳನ್ನು ಕಾಪಾಡಬೇಕೆಂದು ಅವರು ಒತ್ತಾಯಿಸಿದರು.