ಜುಲೈ 2, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎನ್. ಆರ್. ನಾಯಕ್ ಅವರು ಮಾತನಾಡಿದರು. 

 ಕಾಂಗ್ರೆಸ್ ಪಕ್ಷದ ನಾಯಕರು ಬಂಜಾರ (ಲಂಬಾಣಿ) ಜನಾಂಗದ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎನ್ ಆರ್ ನಾಯಕ್ ಅವರು ಒತ್ತಾಯಿಸಿದರು. 

  ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿಗಳ ಅನುದಾನ ನೀಡಬೇಕೆಂದು ಒತ್ತಾಯಿಸಿದರು. 

 ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿರುವ ಬಂಜಾರ ಭವನದ ಮುಂದುವರೆದ ಕಾಮಗಾರಿಗೆ 8 ಕೋಟಿ ರೂಪಾಯಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಹೆಚ್‍.ಬಿ. ಸಿದ್ಯಾನಾಯಕ್ ಅವರು ಉಪಸ್ಥಿತರಿದ್ದರು.