ಜುಲೈ 18, 2024 

ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ ಅಂಡ್ ಹಾಸ್ಪಿಟಲ್ ವತಿಯಿಂದ ಇಂದು "ವೈದ್ಯರ ದಿನಾಚರಣೆ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 

 ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಯಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ಪೂರ್ವ ನಿರ್ದೇಶಕರಾದ ಡಾ|| ಸಿ.ಎನ್. ಮಂಜುನಾಥ್ ಅವರು ಉಪಸ್ಥಿತರಿದ್ದರು.

 ಜತೆಗೆ ಈ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಸಂಸ್ಥಾಪಕ ಕುಲಪತಿಗಳಾದ ಡಾ|| ಎ.ಸಿ. ಷಣ್ಮುಗಂ ಅವರು ಉಪಸ್ಥಿತರಿದ್ದರು. 

  ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಮುಖ ವೈದ್ಯರಿಗೆ ಸನ್ಮಾನ ಮಾಡಲಾಯಿತು. 

 ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ ಸಿ.ಎನ್. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರ ಅತ್ಯಂತ ಅಮೂಲ್ಯವಾದ ಕ್ಷೇತ್ರವಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರು ಅತ್ಯುತ್ತಮವಾದ ಚಿಕಿತ್ಸೆಯನ್ನು ನೀಡಿ ಅವರ ಕಾಯಿಲೆಗಳನ್ನು ಗುಣಪಡಿಸಬೇಕು ಎಂದು ಡಾ ಸಿ.ಎನ್. ಮಂಜುನಾಥ್ ಅವರು ಹೇಳಿದರು.

    ಜೊತೆಗೆ ವೈದ್ಯರು ಯಾವುದೇ ರೋಗಿಯನ್ನು ಬಡವ ಶ್ರೀಮಂತ ಎನ್ನದೆ ಚಿಕಿತ್ಸೆ ನೀಡಬೇಕು, ಯಾವುದೇ ರೀತಿಯಲ್ಲಿ ಭೇದಭಾವ ಮಾಡಬಾರದು. ವೈದ್ಯರು ಪ್ರಾಮಾಣಿಕತೆಯಿಂದ ವೈದ್ಯಕೀಯ ಸೇವೆ ನೀಡಬೇಕು ಎಂದು ಡಾ|| ಸಿ.ಎನ್. ಮಂಜುನಾಥ್ ಅವರು ವೈದ್ಯರಿಗೆ ಕಿವಿಮಾತು ಹೇಳಿದರು.