ಆಗಸ್ಟ್ 14, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಪ್ರಜಾ ವಿಮೋಚನಾ ಚಳುವಳಿ' ರಾಜ್ಯ ಸಮಿತಿಯ ಪದಾಧಿಕಾರಿಗಳ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಆನೇಕಲ್ ಕೃಷ್ಣಪ್ಪ ಅವರು ಮಾತನಾಡಿದರು. 

 PTCL ತಿದ್ದುಪಡಿ ಕಾಯ್ದೆಗೆ ಸವಾಲೊಡ್ಡಿ SC & ST ಸಮುದಾಯಗಳ ವಿರೋಧಿಯಾಗಿ ವರ್ತಿಸುತ್ತಿರುವ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆನೇಕಲ್ ಕೃಷ್ಣಪ್ಪ ಅವರು ಒತ್ತಾಯಿಸಿದರು.

 ಈ ಹಿನ್ನಲೆಯಲ್ಲಿ ಆಗಸ್ಟ್ 16ರಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರ ನಿವಾಸದ ಎದುರು ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಆನೇಕಲ್ ಕೃಷ್ಣಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.