ಆಗಸ್ಟ್ 25, 2024

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ

  ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಪ್ರೆಸ್‌ಕ್ಲಬ್‌ನಲ್ಲಿಂದು ಸದಸ್ಯರ ಕುಟುಂಬದವರಿಗಾಗಿ ವಿವಿಧ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಸಮಾರಂಭವನ್ನು ವಂದೇಕರ್ನಾಟಕ ಮಾಸಿಕ ಪತ್ರಿಕೆ ಹಾಗೂ ನಳಪಾಕ ಹೋಟೆಲ್ ವ್ಯವಸ್ಥಾಪಕ ನಿರ್ದೇಶಕ ಲಿಂಗಯ್ಯ ಕಾಡದೇವರಮಠ ಉದ್ಘಾಟಿದರು.

  ಪ್ರೆಸ್ ಕ್ಲಬ್ ಸದಸ್ಯರ, ಮಾಧ್ಯಮ ಮಿತ್ರರ ಮಕ್ಕಳಿಂದ ರಾಧೆಕೃಷ್ಣ ರ್ಯಾಂಪ್ ವಾಕ್, ಗಾಯನ ಮತ್ತು ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಮಕ್ಕಳು ಭಾಗವಸಿದ್ದರು.  

  ಮುಖ್ಯ ಅತಿಥಿಗಳಾಗಿ ನಳಪಾಕ ಹೋಟೆಲ್ ಮಾಲೀಕರಾದ ಕವಿತಾ ಲಿಂಗಯ್ಯ ಕಾಡದೇವರಮಠ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶನಿ ಗೌಡ, ಗೋಕುಲ್ ಗ್ರೂಪ್ ಮಾಲೀಕರಾದ ಎಂ. ಮಂಜುನಾಥ್, ಬೆಂಗಳೂರು ಪ್ರೆಸ್‌ಕ್ಲಬ್ ಉಪಾಧ್ಯಕ್ಷರಾದ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಕುಮಾ‌ರ್ ಬೆಳ್ಳಿತಟ್ಟೆ, ಸಾಂಸ್ಕೃತಿಕ ಸಮಿತಿ ಸಹ ಸಂಚಾಲಕಿ ರೋಹಿಣಿ ವಿ. ಅಡಿಗ ಹಾಗೂ ಕ್ಲಬ್ ನ ಸಮಿತಿ ಸದಸ್ಯರು ಭಾಗವಹಿಸಿದ್ದರು.