ಸೆಪ್ಟೆಂಬರ್ 2, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ'ಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕರಾದ ರಾಜ್ಯಾಧ್ಯಕ್ಷರಾದ ಎಂ. ಗುರುಮೂರ್ತಿ ಅವರು ಮಾತನಾಡಿದರು. 

 ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟರ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರಂದು 'ಬೃಹತ್ ತಮಟೆ ಚಳುವಳಿ' ನಡೆಯಲಿದೆ ಎಂದು ಎಂ. ಗುರುಮೂರ್ತಿ ಅವರು ಮಾಧ್ಯಮಗಳಿಗೆ ತಿಳಿಸಿದರು. 

   ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸೆಪ್ಟೆಂಬರ್ 12ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಂ. ಗುರುಮೂರ್ತಿ ಅವರು ತಿಳಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಸಚಾಲಕರಾದ ಹನುಮಂತಪ್ಪ ಕಾಕರಗಲ್ ಅವರು ಉಪಸ್ಥಿತರಿದ್ದರು.