ಜನವರಿ 4, 2025

ಕರ್ನಾಟಕ ರಾಜ್ಯ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ (ರಿ) ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

   ರಾಜ್ಯ ಸರ್ಕಾರವು ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರನ್ನು ಒಳ ಗುತ್ತಿಗೆ ನೌಕರರನ್ನಾಗಿ ಮಾಡಬೇಕೆಂದು ರಾಜ್ಯಾಧ್ಯಕ್ಷರಾದ ಎಂ. ಎಸ್. ಲೀಲಾ ಸಾಗ‌ರ್ ಒತ್ತಾಯಿಸಿದರು. 

ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಜನವರಿ 27ರೊಳಗೆ ಈಡೇರಿಸಬೇಕೆಂದು ಒತ್ತಾಯಿಸಿದರು. ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜನವರಿ 28ರಂದು ವಿದ್ಯುತ್ ಬಂದ್ ಮಾಡುತ್ತೇವೆ ಎಂದು ಗೌರವಾಧ್ಯಕ್ಷರಾದ ಮೇಲುಕೋಟೆ ಬೆಟ್ಟಸ್ವಾಮಿ ಗೌಡ ಅವರು ಎಚ್ಚರಿಕೆ ನೀಡಿದರು. 

ಇಂಧನ ಇಲಾಖೆಯಲ್ಲಿ ಪ್ರಾಣಾಪಾಯದಲ್ಲಿ ಕೆಲಸ ಮಾಡುತ್ತಿರುವ

ಕಾರ್ಮಿಕರಿಗೆ ಸೇವಾ ಭದ್ರತೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು

ರಾಜ್ಯದಲ್ಲಿರುವ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಹೊರ

ಗುತ್ತಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಬೃಹತ್ ಪ್ರತಿಭಟನೆ ಮಾಡುತ್ತೇವೆ.

ನಮ್ಮ ಬೇಡಿಕೆಗಳು:

1). ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಮಾಡಬೇಕು

2) ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ಮರು ನೇಮಕ ಮಾಡಬೇಕು. 

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ 2023 ಆಗಸ್ಟ್ ತಿಂಗಳಿನಲ್ಲಿ ಸತತ ಐದು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆದು ಮಾನ್ಯ ಇಂಧನ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದ್ದೆವು. ನಮ್ಮ ಮನವಿಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ಹಂತವಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಹೇಳಿ ನಮ್ಮ ಹೋರಾಟವನ್ನು ಹಿಂಪಡೆಯಲು ಮನವೊಲಿಸಿದ್ದರು. ಅದರಂತೆ ನಾವು ಒಂದು ವರ್ಷ ನಾಲ್ಕು ತಿಂಗಳು ಕಾಲ ಕಾಯ್ದರೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಮತ್ತು ಇಂಧನ ಇಲಾಖೆಯ ವಿರುದ್ಧ ಪ್ರಾಣಪಾಯದಲ್ಲಿ ಕೆಲಸ ಮಾಡುತ್ತಿರುವ ಸ್ಟೇಷನ್ ಅಪರೇಟರ್ಸ್, ಸ್ಟೇಷನ್ ಹೆಲ್ಸರ್ಸ್, ಗ್ಯಾಂಗ್ ಮ್ಯಾನ್, ಮೀಟರ್ ರೀಡರ್ಸ್ ಮತ್ತು ಚಾಲಕರು ಹಾಗು ಮತ್ತಿತರರ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಿನಾಂಕ: 28/01/2025 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರ ಹಿತರಕ್ಷಣಾ ವೇದಿಕೆ ಹಾಗು ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ನಿರ್ಣಯ ಕೈಗೊಂಡಿರುತ್ತೇವೆ ಈ ಪ್ರತಿಭಟನೆಗೆ ವಂಜಿ ಮಾಡಿಕೊಡದೆ ಸರ್ಕಾರ ಮತ್ತು ಇಂದನ ಇಲಾಖೆ ಇದೇ ತಿಂಗಳು 27 ರ ಒಳಗೆ ನೌಕರರ ಹಿತರಕ್ಷಣಾ ವೇದಿಕೆ ಹಾಕಿರುವ 203ಹ ಮಾಧ್ಯಮಗಳ ಮುಖೇನವಾಗಿ ಸರ್ಕಾರವನ್ನು ವಿನಂತಿಸುತೇವೆ. ಒಂದು ವೇಳೆ ಗಡುವು ಮರು ನೇಮಕ ಮಾಡಬೇಕು ಎಂದು ಹೊರ ಗುತ್ತಿಗೆ ನೌಕರರನ್ನು ತಮ್ಮ ನೀಡಿರುವ ದಿನಾಂಕದ ಒಳಗೆ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗೆ ನಿಗದಿ ಮಾಡಿರುವ ದಿನಾಂಕದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೌಕರರು ರಾಜ್ಯದ ಎಲ್ಲಾ ವಿಧ್ಯುತ್ ಉಪ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಮ್ಮ ಕುಟುಂಬ ಸಮೇತವಾಗಿ ಪ್ರತಿಭಟನೆಗೆ ಮುಂದಾಗುತ್ತೇವೆಂದು ನಿಮ್ಮ ಮಾಧ್ಯಮದ ಮೂಲಕ ಸರ್ಕಾರಕ್ಕೆ ತಿಳಿಸ ಬಯಸುತ್ತೇವೆ. ಆದ್ದರಿಂದ ತಮ್ಮ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವನ್ನು ಮಾಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇವೆ.