ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ವತಿಯಿಂದ 'ಕನ್ನಡ ರಾಜ್ಯೋತ್ಸವ' ಹಾಗೂ 'ನೂತನ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.
ಈ ಸಮಾರಂಭದಲ್ಲಿ ಪ್ರಮುಖ ಅತಿಥಿಯಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿಯಾದ ವಿ. ವಿ. ಶಿವರುದ್ರಯ್ಯ ಅವರು ಉಪಸ್ಥಿತರಿದ್ದರು. ಈ ಸಮಾರಂಭವು ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾದ ಸೋಮಶೇಖರ್ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಮಾಡಲಾಯಿತು.